ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಬಂಟ್ವಾಳ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಹಿರಿಯ ಪ್ರಾರ್ಥಮಿಕ ಶಾಲೆ ಪಲ್ಲಮಜಲಿನಲ್ಲಿ ಧರ್ಮಸ್ಥಳ ಶೌರ್ಯ ತಂಡದ ಸದಸ್ಯರಿಂದ ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಜೂಲಿಯಟ್ ಡಿಸೋಜ, ಯೋಜನೆಯ ಕೃಷಿ ಮೇಲ್ವಿಚಾರಕರು ಭಾಸ್ಕರ, ಶೌರ್ಯ ತಂಡದ ಗಣೇಶ್, ದಿವಕರ ಶೆಟ್ಟಿ ಕುಪ್ಪಿಲ, ಸುನಿಲ್ ಕವಿತಾ, ಸಖಿಲ, ರಾಘವೇಂದ್ರ ಕುಪ್ಪಿಲ, ಮೊಹಮದ್ ನಿಸಾರ್ , ಸೇವಾಪ್ರತಿನಿಧಿ ವನಜಾಕ್ಷಿ ಉಪಸ್ಥಿತರಿದ್ದರು.


