ಬಂಟ್ವಾಳ: ಸಜೀಪ ಮೂಡ ಗ್ರಾಮದ ಮೀಸೆ ನಾಗಬನದಲ್ಲಿ ನಾಗರ ಪಂಚಮಿ ಅಂಗವಾಗಿ ಶ್ರೀ ನಾಗದೇವರಿಗೆ ಫಲಪಂಚಾಮೃತ ಅಭಿಷೇಕ ನಡೆಯಿತು.
ಈ ಧಾರ್ಮಿಕ ವಿಧಿವಿಧಾನವನ್ನು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.
ನಾಗರಪಂಚಮಿ ದಿನದಂದು ಊರವರು ಹಾಗೂ ಕುಟುಂಬದವರು ಶ್ರೀ ನಾಗದೇವರ ಕೃಪೆಗೆ ಪಾತ್ರರಾಗಿ ಪ್ರಸಾದವನ್ನು ಸ್ವೀಕರಿಸಿದರು.




