Breaking
5 Aug 2026, Wed

ಕಡೇಶಿವಾಲಯ: ನಾಪತ್ತೆಯಾಗಿದ್ದ ಹೇಮಂತ್ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

ಬಂಟ್ವಾಳ: ಕಳೆದ 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ(21) ಮೃತದೇಹವು ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬಜಾಲ್ ಮುಗೇರು ಬಳಿ ನೇತ್ರಾವತಿ ನದಿಯ ಮಧ್ಯದಲ್ಲಿ ತೇಲುತ್ತಿರುವುದು ಪತ್ತೆಯಾಗಿದೆ.

ಜು. 31ರಂದು ಕಡೇಶಿವಾಲಯ ಗ್ರಾಮ ಪಂಚಾಯತ್ ಸದಸ್ಯರಾದ ಸಂಪತ್ ಸುವರ್ಣ ಹಾಗೂ ಈಶ್ವರ್ ಮಲ್ಪೆ ನೇತೃತ್ವದ ಹೆಚ್ಚುವರಿ ತಂಡಗಳು, ಎನ್‌ಡಿಆರ್‌ಎಫ್ ಮತ್ತು ಸ್ಥಳೀಯ ಈಜುಗಾರ ನಿಸಾರ್ ಅವರನ್ನು ಒಳಗೊಂಡ ತಂಡ ಹೇಮಂತ್‌ಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದು, ಆರಂಭದಲ್ಲಿ ಯಾವುದೇ ಸುಳಿವು ಪತ್ತೆಯಾಗಿರಲಿಲ್ಲ.

ನಂತರ ಮಧ್ಯಾಹ್ನ, ಮೂರು ವಿಭಿನ್ನ ತಂಡಗಳಿಂದ ತುಂಬೆ ಡ್ಯಾಂನಿಂದ ಕೆಳಕ್ಕೆ ಡ್ರೋನ್ ಸಹಾಯದಿಂದ ಶೋಧ ಕಾರ್ಯಾಚರಣೆ ನಡೆಸಲಾಯಿತು. ಸಂಜೆಯ ಹೊತ್ತಿಗೆ, ಡ್ರೋನ್ ನದಿಯಲ್ಲಿ ತೇಲುತ್ತಿರುವ ದೇಹವನ್ನು ಪತ್ತೆ ಮಾಡಿದೆ. ನಂತರ ಶೋಧ ತಂಡವು ಯಶಸ್ವಿಯಾಗಿ ಹೇಮಂತ್ ಅವರ ದೇಹವನ್ನು ನೀರಿನಿಂದ ಹೊರತೆಗೆದಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *