ಮೂಡುಬಿದಿರೆ: ಕಾರಣಿಕ ಕ್ಷೇತ್ರ ಮೂಡುಬಿದಿರೆಯ ಶ್ರೀ ಹನುಮಂತ ದೇವಸ್ಥಾನಕ್ಕೆ ಐಎಎಸ್ ಅಧಿಕಾರಿ, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರು ಕುಟುಂಬ ಸಮೇತ ಭೇಟಿ ನೀಡಿ ದೇವರ ದಶ೯ನ ಪಡೆದುಕೊಂಡರು.

ರೋಹಿಣಿ ಅವರು ಈ ಹಿಂದೆ ಮೂಡುಬಿದಿರೆಯಲ್ಲಿ ಪ್ರಭಾರ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.
ಮಾತ್ರವಲ್ಲ ಇಲ್ಲಿನ ರಸ್ತೆ ಅಗಲೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಖಡಕ್ ಮಹಿಳಾ ಆಫೀಸರ್ ಎಂದೇ ಅವರು ಗುರುತಿಸಿಕೊಂಡಿದ್ದರು.

ಈ ಸಂದರ್ಭ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಅದಾನಿ ಗ್ರೂಪ್ ನ ಕಿಶೋರ್ ಆಳ್ವ ಅವರು ಜೊತೆಗಿದ್ದರು.



