ಬಂಟ್ವಾಳ: ದ. ಕ. ಜಿ. ಪಂ. ಹಿ. ಪ್ರಾ. ಶಾಲೆ ಪಾಂಡವರಕಲ್ಲು -ಬಂಟ್ವಾಳ ಇವರ ಸಹಯೋಗದೊಂದಿಗೆ ವಾಮದಪದವು ವಲಯ ಮಟ್ಟದ ಪ್ರಾಥಮಿಕ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ
ಉದ್ಘಾಟನಾ ಕಾರ್ಯಕ್ರಮವು ಬಂಟ್ವಾಳ ತಾಲೂಕು ಬಡಗಕಜೆಕಾರು ಗ್ರಾಮದ ಪಾಂಡವರಕಲ್ಲು ಶಾಲೆಯಲ್ಲಿ ಆ.13 ರಂದು ನೆರವೇರಿತು.

ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಜೆ ಇವರ ಅಧ್ಯಕ್ಷತೆಯಲ್ಲಿ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ದೇವದಾಸ್ ಅಬುರ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರು ಸತೀಶ್ ಬಂಗೇರ, ಮೋನಪ್ಪ ಕಂಡೆತ್ಯಾರಾ, ಹಮೀದ್ ಮಾಸ್ಟರ್ ಮತ್ತು ಎಸ್ ಡಿ ಎಂ ಸಿ ಸದಸ್ಯರು ಹಾಗೂ ಊರಿನ ಪ್ರಮುಖ ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೆರವೇರಿತು.



