ಮೈಮೇಲೆ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕ ಸಾವು

ಕಾಸರಗೋಡು : ಜಿಲ್ಲೆಯ ಬದಿಯಡ್ಕದಲ್ಲಿ ರಸ್ತೆಯಲ್ಲಿ ಅಡ್ಡಲಾಗಿ ಇದ್ದ ಮರದ ಗೆಲ್ಲನ್ನು ಬದಿಗೆ ಸರಿಸಲು ಲಾರಿಯಿಂದ ಕೆಳಗೆ ಇಳಿದಿದ್ದ ಸಂದರ್ಭದಲ್ಲಿ ಮತ್ತೊಂದು ಗೆಲ್ಲು ಇವರ ಮೈಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಮೃತಪಟ್ಟವರು ಪೆರಾಜೆ ಗ್ರಾಮದ ಕುಡೋಲು ಜಗದೀಶ್ ಗೌಡ (50)

ಇವರು ಮೂಡಬಿದಿರೆಯ ಫೀಡ್ ತಯಾರಿಕೆ ಮಾಡುವ ಖಾಸಗಿ ಕಂಪೆನಿಯೊಂದರಲ್ಲಿ ಲಾರಿ ಚಾಲಕ ವೃತ್ತಿಯನ್ನು ಮಾಡುತ್ತಿದ್ದು, ಕಂಪೆನಿಯಿಂದ ಫೀಡ್ ಲೋಡ್ ಮಾಡಿ ಕಾಸರಗೋಡು ಜಿಲ್ಲೆಗೆ ಹೋಗಿ ಹಿಂದೆ ಬರುವ ವೇಳೆ ಈ ಘಟನೆ ನಡೆದಿದೆ.

ಇದರಿಂದ ಗಂಭೀರ ಗಾಯಗೊಂಡ ಅವರನ್ನು ‌ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸಿದೆ ಮೃತಪಟ್ಟಿದ್ದಾರೆ.

ಕಾಸರಗೋಡು ಪೋಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *