ಮಂಗಳೂರು: ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡಿದ್ದ ಅನಾಮಿಕನ ಅಸಲಿ ಮುಖ ಈಗ ಅನಾವರಣಗೊಂಡಿದ್ದು ಅನಾಮಿಕನ್ನು 10 ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ನೀಡಿದೆ.

ಅನಾಮಿಕನು ಮಂಡ್ಯ ಜಿಲ್ಲೆಯವನಾಗಿದ್ದು, ಸಿಎ ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ತಿಳಿದುಬಂದಿದೆ. ಎಸ್ಐಟಿ ಅಧಿಕಾರಿಗಳು ಈತನನ್ನು ಬಂಧಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.




