ಬಂಟ್ವಾಳ: ತಾಲೂಕು ಸಂಗಬೆಟ್ಟು ಗ್ರಾಮ ಅಜ್ಜಿಬಾಕ್ಯರು ನಿವಾಸಿ, ಸಿದ್ದಕಟ್ಟೆ ಸಿ. ಎ. ಬ್ಯಾಂಕ್ ನಿವೃತ್ತ ಉದ್ಯೋಗಿ ಜನಾರ್ದನ ಶೆಟ್ಟಿಗಾರ್ ಅವರು(67 ವ) ಅಲ್ಪಕಾಲದ ಅಸೌಖ್ಯದಿಂದ ನಿಧಾನರಾಗಿದ್ದಾರೆ.

ಸಾಮಾಜಿಕವಾಗಿ ಎಲ್ಲರೊಂದಿಗೆ ಬೆರೆಯುತ್ತಿದ್ದ ಇವರು, ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನ ಸಂಗಬೆಟ್ಟು ಇದರಲ್ಲಿ ಸಕ್ರಿಯ ಸದಸ್ಯರಾಗಿದ್ದರು.
ಮೃತರ ಆತ್ಮಕ್ಕೆ ಚಿರಶಾಂತಿ ಬಯಸುತ್ತಾ ಕುಟುಂಬವರ್ಗಕ್ಕೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರು ಎರಡು ಹೆಣ್ಣು ಒಂದು ಗಂಡು ಮಗು ಹಾಗೂ ಪತ್ನಿ ಮತ್ತು ಅಪಾರ ಬಂಧು,ಬಳಗವನ್ನು ಅಗಲಿದ್ದಾರೆ.



