Breaking
23 Mar 2026, Mon

ಕುಂದಾಪುರದಲ್ಲಿ ಪೊಲೀಸರಿಂದ ನಾಲ್ವರು ಅಂತಾರಾಜ್ಯ ಕಳ್ಳರ ಬಂಧನ

ಕುಂದಾಪುರ : ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಸಹಿತ ವಿವಿಧ ಜಿಲ್ಲೆಗಳಲ್ಲಿ ಮನೆಗಳ್ಳತನ ನಡೆಸಿದ್ದ ಪ್ರಕರಣದಲ್ಲಿ ಪೊಲೀಸರು ನಾಲ್ವರು ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರ ಮೂಲದ ಸೊಲ್ಲಾಪುರ ಭಾಗದ ನಿವಾಸಿಗಳಾದ ವಿವೇಕ್ ಅಂಬರ್ (26), ಅಜೀಜ್ (28), ಲಖನ್ ಅಶೋಕ್ ಕುಲಕರ್ಣಿ (31) ಹಾಗೂ ಸಂದೀಪ್ ದಿಲೀಪ್ (25) ಎಂದು ಗುರುತಿಸಲಾಗಿದೆ.

ಈ ಆರೋಪಿಗಳು ಕಳೆದ ಜು.19 ರಂದು ಇಲ್ಲಿನ ಪುರಸಭೆ ವ್ಯಾಪ್ತಿಯ ಬಿಬಿ ರಸ್ತೆಯ ವೆಸ್ಟ್ ಬ್ಲಾಕ್ನಲ್ಲಿರುವ ರೋಹಿತ್ ಅವರ ಮನೆಗೆ ಯಾರೂ ಇಲ್ಲದ ವೇಳೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ಇನ್ನಿತರ ಸೊತ್ತುಗಳನ್ನು ಕಳವುಗೈದಿದ್ದರು.

ಮಾತ್ರವಲ್ಲ ಇಲ್ಲಿನ ಪಿ. ರವೀಂದ್ರ ಅವರ ಮನೆಗೆ ನುಗ್ಗಿದ ಕಳ್ಳರು ಬೆಳ್ಳಿ, ಚಿನ್ನಾಭರಣ ಸೇರಿದಂತೆ ಒಟ್ಟಾರೆ 4.57 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಕಳವುಗೈದಿದ್ದರು. ಇದಲ್ಲದೆ ಇವರು ಹಳಿಯಾಳ ಠಾಣಾ ವ್ಯಾಪ್ತಿಯಲ್ಲೂ ನಡೆದ ಕಳ್ಳತನದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.

ಈ ನಿಟ್ಟಿನಲ್ಲಿ ಕಳ್ಳತನ ಕೃತ್ಯಕ್ಕೆ ಸಂಬಂಧಿಸಿದಂತೆ ಬಾಡಿ ವಾರಂಟ್ ಮೂಲಕ ಕುಂದಾಪುರ ಠಾಣಾಧಿಕಾರಿ ನಂಜಾ ನಾಯಕ್ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *