ಪೂಜ್ಯ ಖಾವಂದರೆ, ನಿಮಗೆ ಅಣ್ಣಪ್ಪ, ಮಂಜುನಾಥನ ಆಶೀರ್ವಾದವಿದೆ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಧರ್ಮಸ್ಥಳ: ಪೂಜ್ಯ ಖಾವಂದರೆ, ನಿಮಗೆ ಅಣ್ಣಪ್ಪ, ಮಂಜುನಾಥನ ಆಶೀರ್ವಾದವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರದ ವಿರುದ್ದ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ ಬಿಜೆಪಿ ಧರ್ಮಸ್ಥಳ ಕ್ಷೇತ್ರದಲ್ಲಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಇಂದು ನಡೆದ ಧರ್ಮಸ್ಥಳ ಉದ್ಟಾಟಿಸಿ ಅವರು ಮಾತನಾಡಿದ ಅವರು ಹಿಂದೂ ಸಮಾಜ ಹಾಗೂ ಮೋದಿ ನೇತೃತ್ವದ ಸರಕಾರ ನಿಮ್ಮ ಜೊತೆಯಿದೆ ಎಂದರು.

ಈ ಸಂದರ್ಭ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜೇಯೇಂದ್ರ, ಮುಖ್ಯಮಂತ್ರಿ ಸದಾನಂದ ಗೌಡ, ಬಿಜೆಪಿ ರಾಜ್ಯ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಅಶ್ವಥ್ ಕುಮಾರ್, ವಿಪಕ್ಷ ನಾಯಕ ಆರ್ ಅಶೋಕ್, ಮಾಜಿ ಸಚಿವ ಶ್ರೀರಾಮುಲು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ, ಕ್ಯಾ. ಬ್ರಿಜೇಶ್ ಚೌಟ, ತೇಜಸ್ವಿ ಸೂರ್ಯ ಇನ್ನಿತರ ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.

ಸಮಾವೇಶದಲ್ಲಿ ಸಾಗರೋಪಾದಿ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರ ಭಾಗಿಯಾದರು.

Leave a Reply

Your email address will not be published. Required fields are marked *