ಹೆಬ್ರಿ: ಉಡುಪಿ- ಶಿವಮೊಗ್ಗ ಸಂಪರ್ಕಿಸುವ ಆಗುಂಬೆ ಘಾಟಿ 166 ಎ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಮರ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಇಂದು ಮುಂಜಾನೆ ನಡೆದಿದೆ.
ಆಗುಂಬೆ ಘಾಟಿಯ ಮೇಲ್ಭಾಗದ 8ನೇ ತಿರುವಿನಲ್ಲಿ ರಸ್ತೆಗೆ ಮರ ಬಿದ್ದ ಪರಿಣಾಮ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು ತಕ್ಷಣ ಕುಂದಾಪುರ ಸ್ಟೈಲ್ ಟಿವಿ ತಂಡ ಮರವನ್ನು ತೆರವು ಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು ಎಂದು ತಿಳಿದುಬಂದಿದೆ.




