Breaking
19 Sep 2026, Sat

ಸರಕಾರಿ ಪ್ರಥಮ ದರ್ಜೆ ಕಾಲೇಜ್ ವಿಟ್ಲದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ವಿಟ್ಲ, ಜನಜಾಗೃತಿ ವೇದಿಕೆ ವಿಟ್ಲ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ವಿಟ್ಲ ವಲಯದ ಆಶ್ರಯದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ವಿಟ್ಲ ಇಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಇಂದು (ಸೆ.02) ನಡೆಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲಾರದ ಪ್ರೊ. ಪದ್ಮನಾಭ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ರೇಣುಕಾ ಕಣಿಯೂರ್ ಅವರು ಕಾಲೇಜು ವಿದ್ಯಾರ್ಥಿಗಳು ದುಶ್ಚಟ ಬಲಿಯಾಗುತ್ತಿದ್ದು ಅದರಿಂದ ದೂರವಿರುವ ಬಗ್ಗೆ ಮತ್ತು ದುಶ್ಚಟದಿಂದ ಆಗುವ ಕುಟುಂಬ ಮತ್ತು ಸಮಾಜಕ್ಕೆ ಆಗುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀಮತಿ ಶಶಿಕಲಾ, ಶ್ರೀಮತಿ ಸುಜಾತ, ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ವಲಯದ ಮೇಲ್ವಿಚಾರಕ ಜಗದೀಶ್ ಪೂಜಾರಿ ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಶ್ರೀಮತಿ ಆಶಾ, ಕು. ಚೇತನ ಸಹಕರಿಸಿದರು.

Leave a Reply

Your email address will not be published. Required fields are marked *