ಕಡಬ: ವ್ಯಕ್ತಿಯೊಬ್ಬರು ತೋಡಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಪಾರ್ಲ- ಕಲ್ಲಗಂಡಿ ಎಂಬಲ್ಲಿ ಸೆ.3ರಂದು ನಡೆದಿದೆ.
ಮೃತ ವ್ಯಕ್ತಿಯನ್ನು ಕೊಳ್ತಿಗೆ ಗ್ರಾಮದ ಬಾಯಂಬಾಡಿ ನಿವಾಸಿ ಶಿವರಾಮ ಮಣಿಯಾಣಿ (38ವ.) ಎಂದು ಗುರುತಿಸಲಾಗಿದೆ

ಶಿವರಾಮ ಮಣಿಯಾಣಿ ಅವರು ಆಕಸ್ಮಿಕವಾಗಿ ನೀರಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ವಿಪರೀತ ಮಳೆ ಸುರಿದ ಪರಿಣಾಮ ನೀರಿನ ಪ್ರಮಾಣ ಹೆಚ್ಚಳವಾಗಿದ್ದರಿಂದ ಕೊಚ್ಚಿಕೊಂಡು ಬಂದಿರುವ ಸಾಧ್ಯತೆ ಇದೆ ಎನ್ನಲಾಗಿದೆ



