ಮಂಗಳೂರು: ಎಂಸಿಸಿ ಬ್ಯಾಂಕ್ ಬೈಂದೂರು ಶಾಖೆಯಲ್ಲಿ ಸೆ. 4 ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ವಹಿಸಿದ್ದರು.
ವೇದಿಕೆಯಲ್ಲಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಹೊಸಾಡು ರಾಮ ಶೇರಿಗಾರ್ ಮತ್ತು 2025ರ ಐಐಬಿಎಸ್ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಆಶಾ ವೀಣಾ ಡಯಾಸ್ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿದ್ದರು. ಎಂಸಿಸಿ ಬ್ಯಾಂಕಿನ ನಿರ್ದೇಶಕರಾದ ಎಲ್ರಾಯ್ ಕೆ. ಕ್ರಾಸ್ಟೊ ಮತ್ತು ಶಾಖೆಯ ಹಿರಿಯ ವ್ಯವಸ್ಥಾಪಕರಾದ ಸಂದೀಪ್ ಕ್ವಾಡ್ರಾಸ್ ಉಪಸ್ಥಿತರಿದ್ದರು.

ಶಿಕ್ಷಕರ ದಿನದ ಉತ್ಸಾಹವನ್ನು ಗುರುತಿಸುವ ಮೂಲಕ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಪ್ರಾರಂಭವಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ, ಅಧ್ಯಕ್ಷ “ಸಹಕಾರ ರತ್ನ “ ಅನಿಲ್ ಲೋಬೊ ಅವರು ಬೈಂದೂರು ಶಾಖೆಯಲ್ಲಿ ಶಿಕ್ಷಕರ ದಿನವನ್ನು ಆಚರಿಸಲು ಸಂತೋಷಕರ ಎಂದರು. ಯುವ ವಿದ್ಯಾರ್ಥಿಗಳ ವೃತ್ತಿಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖ ಎಂದು ಹೇಳಿ ಶಿಕ್ಷಕರು ರಾಷ್ಟ ನಿರ್ಮಾಣಕಾರರು ಎಂದರು.

ಹೊಸಾಡು ರಾಮ ಶೇರಿಗಾರ್ ಅವರು ಮಾತನಾಡಿ, ಬೈಂದೂರಿನಲ್ಲಿ ಇದೇ ಮೊದಲ ಬಾರಿಗೆ ಶಿಕ್ಷಕರ ದಿನಾಚರಣೆಯನ್ನು ಆಯೋಜಿಸಿದ ಎಂಸಿಸಿ ಬ್ಯಾಂಕಿನ ಉಪಕ್ರಮವನ್ನು ಶ್ಲಾಘಿಸಿದರು. ಬ್ಯಾಂಕಿನ ಅಭಿವೃದ್ಧಿಯ ಬಗ್ಗೆ ಮಾತನಾಡಿದ ಅವರು, ಎಂಸಿಸಿ ಬ್ಯಾಂಕ್ ನೀಡುವ ಸೇವೆಗಳನ್ನು ಬಳಸಿಕೊಳ್ಳುವಂತೆ ಶಿಕ್ಷಕರನ್ನು ಒತ್ತಾಯಿಸಿ, ಆರೋಗ್ಯಕರ ಸಮಾಜವನ್ನು ನಿರ್ಮಿಸುವಲ್ಲಿ ಶಿಕ್ಷಕರ ಪ್ರಮುಖ ಪಾತ್ರವನ್ನು ಎಂದರು.

ಆಶಾ ವೀಣಾ ಡಯಾಸ್ ಅವರು ಶಿಕ್ಷಕರು ನಿಸ್ವಾರ್ಥ ಸೇವೆಯನ್ನು ನೀಡುತ್ತಾರೆ ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಹೇಳಿದರು. ತಮ್ಮ 18 ವರ್ಷಗಳ ಬೋಧನಾ ಜೀವನದಲ್ಲಿ, ಬ್ಯಾಂಕ್ ಶಿಕ್ಷಕರ ಕೊಡುಗೆಗಾಗಿ ಗುರುತಿಸಿದ್ದು ಇದೇ ಮೊದಲು ಎಂದು ಹೇಳಿ ಎಲ್ಲಾ ಶಿಕ್ಷಕರ ಪರವಾಗಿ, ಎಂಸಿಸಿ ಬ್ಯಾಂಕ್ ಗೌರವ ಸಲ್ಲಿಸಿದ್ದಕ್ಕಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಕಿ ಕಾರ್ಯಕ್ರಮದಲ್ಲಿದ್ದ ಎಲ್ಲಾ ಶಿಕ್ಷಕರನ್ನು ಅಧ್ಯಕ್ಷ ಶ್ರೀ ಅನಿಲ್ ಲೋಬೊ ಸನ್ಮಾನಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಸಿಬ್ಬಂದಿ ಪ್ರಾರ್ಥನೆ ಹಾಡಿದರು. ಬ್ಯಾಂಕಿನ ನಿರ್ದೇಶಕರಾದ ಎಲ್ರೊಯ್ ಕಿರಣ್ ಕ್ರಾಸ್ಟೊ ಸ್ವಾಗತಿಸಿ, ಹಿರಿಯ ವ್ಯವಸ್ಥಾಪಕ ಸಂದೀಪ್ ಕ್ವಾಡ್ರಾಸ್ ವಂದಿಸಿದರು. ಕಾರ್ಯಕ್ರಮವನ್ನು ಹಿರಿಯ ಸಹಾಯಕಿ ಜೋನಿಟಾ ರೆಬೆಲ್ಲೊ ನಿರೂಪಿಸಿದರು.



