ಕಾಸರಗೋಡು: ಗುಂಡು ಹಾರಿಸಿಕೊಂಡು ವೃದ್ಧರೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಮೀಯಪದವು ಮದಂಗಲ್ಲು ಎಂಬಲ್ಲಿ ಸೆ.05 ರಂದು ನಡೆದಿದೆ.
ಮೃತರನ್ನು ಮದಂಗಲ್ಲಿನ ಸುಬ್ರಾಯ ಭಟ್ (86) ಎಂದು ಗುರುತಿಸಲಾಗಿದೆ.

ಸುಬ್ರಾಯ ಭಟ್ ಅವರು ಮಾನಸಿಕ ಅಸ್ವಸ್ಥತೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಈ ಕುರಿತು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




