ಬೆಳ್ತಂಗಡಿ: ತಾಲೂಕಿನ ಬೆಳಾಲು-ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕೋಟ್ಯಾಂತರ ರೂ. ವಂಚನೆ ಆರೋಪದಡಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸೊಸೈಟಿಯ ಸಿಬ್ಬಂದಿಗಳಾದ ಪ್ರಶಾಂತ್ ಮತ್ತು ಸದಾಶಿವರ ಮೇಲೆ ವಂಚನೆ ಆರೋಪವಿದ್ದು, ಇವರಲ್ಲಿ ಸದಾಶಿವನನ್ನು ಬಂಧಿಸಿದ್ದು ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರದಿದೆ.




