ಕಾರ್ಕಳ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಕೇರಳ ಹಿಂದೂ ಐಕ್ಯ ವೇದಿಕೆಯ ರವೀಶ ತಂತ್ರಿ ಕುಂಟಾರು ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.10 ರಂದು ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮ ಪಂಚಾಯತ್ ಎದುರಿನ ಮೈದಾನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆ ವತಿಯಿಂದ ನಡೆದ ಜನಾಗ್ರಹ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಕೇಳಿ ಬಂದಿದೆ.

ಈ ಸಭೆಯಲ್ಲಿ ರವೀಶ ತಂತ್ರಿ ಕುಂಟಾರು ದಿಕ್ಸೂಚಿ ಭಾಷಣಗಾರರಾಗಿ ಭಾಗವಹಿಸಿದ್ದು, ಇವರು ಸಭೆಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಉದ್ದೇಶ ಪೂರ್ವಕವಾಗಿ ಶಾಂತಿಭಂಗ ಕೃತ್ಯದಲ್ಲಿ ತೊಡಗಿ ದ್ವೇಷ, ಅಸೂಯೆ, ವೈಮನಸ್ಸು, ಶತ್ರುತ್ವಕ್ಕೆ ಪ್ರಚೋದನೆ ನೀಡಿ ದ್ವೇಷಪೂರಿತ ಭಾಷಣ ಮಾಡಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.




