Breaking
10 May 2026, Sun

ಶರಣ್ ಪಂಪುವೆಲ್ ಅವರ ಚಿತ್ರದುರ್ಗ ನಿರ್ಬಂಧ ರದ್ದು

ಚಿತ್ರದುರ್ಗ: ಸೆ.14 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಭಾಗಿಯಾಗಲು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಗೆ ಹೇರಿದ್ದ ನಿರ್ಬಂಧವನ್ನು ತೆರವು ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲಾಡಳಿತ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ನಿರ್ಬಂಧ ಹೇರಿದ್ದು, ಈ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್ ಚಿತ್ರದುರ್ಗದಲ್ಲಿ ನಾಳೆ ನಡೆಯುವ ಹಿಂದು ಮಹಾಗಣಪತಿ ಶೋಭಾ ಯಾತ್ರೆಯಲ್ಲಿ ಭಾಗಿಯಾಗಲು ಅನುಮತಿ ನೀಡಿದೆ.

ಈ ನಿರ್ಬಂಧ ಪರವಾಗಿ ವಕೀಲರಾದ ಅರುಣ್ ಶಾಮ್ ಮತ್ತು ಸುಯೋಗ್ ಹೇರಳೆ ವಾದಿಸಿದರು.

Leave a Reply

Your email address will not be published. Required fields are marked *