ಮಂಡ್ಯ: 14 ವರ್ಷದೊಳಗಿನ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ನಾಗಮಂಗಲ ತಾಲೂಕು, ಬಿಜಿಎಸ್ ಆದಿಶಕ್ತಿ ಚುಂಚನಗಿರಿ ಶಾಲಾ ಮಕ್ಕಳು ಪ್ರಥಮ ಬಹುಮಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜೇತ ಮಕ್ಕಳಿಗೆ ಶಾಲಾ ಮುಖ್ಯಶಿಕ್ಷಕರು ಮತ್ತು ಶಾಲೆಯ ಎಲ್ಲಾ ಶಿಕ್ಷಕ ವೃಂದ ಪ್ರಮಾಣ ಪತ್ರ ಮತ್ತು ನೆನಪಿನ ಕಾಣಿಕೆ ನೀಡಿ ಅಭಿನಂದನೆ ಸಲ್ಲಿಸಿ ಮುಂದಿನ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಶುಭ ಕೋರಿದರು.





