Breaking
23 Mar 2026, Mon

ಕಾರ್ಕಳದ ಬಿ ಎಸ್ಸಿ ನರ್ಸಿಂಗ್ ಕಾಲೇಜಿನಲ್ಲಿ ಸಮಸ್ಯೆ: ಕಾರ್ಕಳ ಎಬಿವಿಪಿ ವತಿಯಿಂದ ಪ್ರಾಂಶುಪಾಲರಿಗೆ ಸರಿಪಡಿಸಲು ಒತ್ತಾಯ

ಕಾರ್ಕಳ: ಕಾರ್ಕಳದ ಬಿ ಎಸ್ಸಿ ನರ್ಸಿಂಗ್ ಕಾಲೇಜಿನಲ್ಲಿ ಸಮಸ್ಯೆಗಳನ್ನು ಸರಿಪಡಿಸುವಂತೆ ಕಾರ್ಕಳ ತಾಲೂಕು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರಾಂಶುಪಾಲಾರಿಗೆ ಮನವಿ ಸೆ.19 ಸಲ್ಲಿಸಲಾಯಿತು.

ಕಾಲೇಜಿನಲ್ಲಿ ಕಳೆದ 4 ವರ್ಷಗಳಿಂದ ವಿದ್ಯಾರ್ಥಿಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸುಸಜ್ಜಿತ ಕಟ್ಟಡ, ಸರಿಯಾದ ತರಗತಿ ಕೊಠಡಿಗಳು, ಶಾಚಾಲಯ ವ್ಯವಸ್ಥೆ, ನರ್ಸಿಂಗ್ ವ್ಯಾಸಂಗಕ್ಕೆ ಬೇಕಾದ ಅತ್ಯಗತ್ಯ ಉಪಕರಣಗಳು, ಸರಿಯಾದ ಪ್ರಯೋಗಾಲಯ, ಗ್ರಂಥಾಲಯ ವ್ಯವಸ್ಥೆ ,ಕಾಲೇಜು ನಿರ್ವಹಣೆಗೆ ಬೇಕಾದ ಗುಮಾಸ್ತರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಹಾಗೂ ಉಪನ್ಯಾಸಕರು ಇಲ್ಲದೆ ವಿದ್ಯಾರ್ಥಿಗಳು ಸಮಸ್ಯೆಗಳ ಸರಮಾಲೆಯನ್ನು ಪ್ರಾಂಶುಪಾಲರ ಗಮನಕ್ಕೆ ತರಲಾಯಿತು.

ಹೀಗಾಗಿ ಕಾಲೇಜಿನ ಆಡಳಿತ ಮಂಡಳಿ ಕೂಡಲೇ ಸರಿಯಾದ ವ್ಯವಸ್ಥೆಗಳನ್ನು ಒದಗಿಸಿ ಉತ್ತಮ ವಿಧ್ಯಾಭ್ಯಾಸಕ್ಕೆ ಅವಕಾಶ ಒದಗಿಸಬೇಕೆಂದು ಒತ್ತಾಯಿಸಲಾಯಿತು.

ಈ ಸಂದರ್ಭ ರಾಜ್ಯ ಸಹ ಕಾರ್ಯದರ್ಶಿಗಳಾದ ಗಣೇಶ್ ಪೂಜಾರಿ, ಉಡುಪಿ ಜಿಲ್ಲಾ ಸಂಚಾಲಕರದ ಶ್ರೇಯಸ್ ಅಂಚನ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *