ಉಡುಪಿ: ಬೀಚ್ ನಲ್ಲಿ ಈಜಾಡುತ್ತಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದು, ಓರ್ವನನ್ನು ರಕ್ಷಿಸಿರುವ ಘಟನೆ ಉಡುಪಿಯ ಮಲ್ಪೆ ಬೀಚ್ ನಲ್ಲಿ ಅ.3 ರಂದು ನಡೆದಿದೆ.

ಹಾಸನ ಮೂಲದ ಮಿಥುನ್ ಮತ್ತು ಶಶಾಂಕ್ ನೀರುಪಾಲಾದ ಯುವಕರಾಗಿದ್ದು, ಶಶಾಂಕ್ ಎಂಬಾತನನ್ನು ಸಹ ಪ್ರವಾಸಿಗರು ರಕ್ಷಣೆ ಮಾಡಿದ್ದು ಗಂಭೀರ ಸ್ಥಿತಿಯಲ್ಲಿರುವ ಆತನನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಇತ್ತ ನಾಪತ್ತೆಯಾಗಿರುವ ಮಿಥುನ್ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ.





