Breaking
19 Sep 2026, Sat

ಬೆಂಗಳೂರಿನಲ್ಲಿ ಮರದ ಕೊಂಬೆ ಬಿದ್ದು ಯುವತಿ ಸಾವು

ಬೆಂಗಳೂರು: ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸೋಲದೇವನ ಹಳ್ಳಿಯಲ್ಲಿ ನಡೆದಿದೆ.

ಹೆಬ್ಬಾಳ ಮೂಲದ ಕೀರ್ತನಾ (24) ಸಾವನ್ನಪ್ಪಿರುವ ಯುವತಿಯಾಗಿದ್ದಾಳೆ.

ಯುವತಿ ಕೀರ್ತನಾ ಮತ್ತು ಆಕೆಯ ಸ್ನೇಹಿತೆ ಬೆಂಗಳೂರಿನ ಆಚಾರ್ಯ ಕಾಲೇಜಿನಲ್ಲಿ ನಡೆಯುತ್ತಿದ್ದ ಸ್ಯಾಂಡಲ್ ವುಡ್ ಕ್ರಿಕೆಟ್ ಪ್ರೀಮಿಯರ್ ಲೀಗ್ ನೋಡೋಕೆ ಹೋಗಿದ್ರು. ಕ್ರಿಕೆಟ್ ಮ್ಯಾಚ್ ನೋಡಿ ಕೊಂಡು ವಾಪಸ್ ಬರ್ತಿದ್ದ ವೇಳೆ ಎರಡು ಬೈಕ್ ಗಳ ಮೇಲೆ ಮರದ ಕೊಂಬೆ ಬಿದ್ದಿದೆ.

ಈ ವೇಳೆ ಕೀರ್ತನಾ ಸ್ಥಳದಲ್ಲೇ ಮೃತಪಟ್ಟರೆ ಆಕೆಯ ಸ್ನೇಹಿತೆ ಮತ್ತು ಮತ್ತೊಂದು ಬೈಕ್‌ನಲ್ಲಿದ್ದ ಭಾಸ್ಕರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಬ್ಬರನ್ನು ನಗರದ ಸಪ್ತಗಿರಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *