Breaking
29 Jun 2026, Mon

ಮಲ್ಪೆ ಬೀಚ್ ನಲ್ಲಿ ನುರಿತ ಲೈಫ್ ಗಾರ್ಡ್ ಗಳನ್ನು ನೇಮಿಸಲು ಮೀನುಗಾರ ಮುಖಂಡ ವಿಶ್ವಾಸ್ ವಿ ಅಮೀನ್ ಒತ್ತಾಯ

ಉಡುಪಿ: ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರು ಸಮುದ್ರದಲ್ಲಿ ಈಜಲು ಹೋಗಿ ಸಮುದ್ರ ಪಾಲಾಗಿದ್ದು ಇಬ್ಬರು ಮೃತಪಟ್ಟಿದ್ದು ಒಬ್ಬ ಪ್ರವಾಸಿಗ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮೀನುಗಾರ ಮುಖಂಡ ವಿಶ್ವಾಸ್ ವಿ. ಅಮೀನ್ ಪ್ರತಿಕ್ರಿಯೆ ನೀಡಿದ್ದು ಮಾಧ್ಯಮದಲ್ಲಿ ಹಾಗೂ ಸಾರ್ವಜನಿಕವಾಗಿ ಜಿಲ್ಲಾಡಳಿತದ ನಿರ್ಲಕ್ಷ್ಯ ಎಂಬ ಮಾತು ಕೇಳಿಬರುತ್ತಿದ್ದು ಇದಕ್ಕೆ ಪ್ರಮುಖ ಕಾರಣ ಕನಿಷ್ಠ ಈಜಲು ಬರದ ಮೂರು ಲೈಫ್ ಗಾರ್ಡ್ ಗಳು ಸ್ಥಳದಲ್ಲಿ ಇದ್ದು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಪ್ರವಾಸಿಗರನ್ನು ನಿಯಂತ್ರಿಸಲು ಅಥವಾ ಯಾವುದೇ ಅವಘಡ ಸಂಭವಿಸಿದಾಗ ರಕ್ಷಿಸಲು ಅಸಾಧ್ಯ ವಾದ ಕಾರಣ ತಕ್ಷಣ ಜಿಲ್ಲಾಡಳಿತದ ವತಿಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು. ವಿಶ್ವ ಪ್ರಸಿದ್ಧ ಮಲ್ಪೆ ಬೀಚ್ ನಲ್ಲಿ ಈಜು ಬಾರದ ಲೈಫ್ ಗಾರ್ಡ್ ಗಳನ್ನು ನೇಮಿಸಿರುವುದರ ಕಾರಣ ಏನು ಎಂಬ ಯಕ್ಷ ಪ್ರಶ್ನೆಯು ಮೂಡಿದ್ದು ಇದರ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳಬೇಕು.

ಮಲ್ಪೆ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಪ್ರಮುಖ ಬೀಚ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯ ನುರಿತ ಲೈಫ್ ಗಾರ್ಡ್ ಗಳನ್ನು ಅತೀ ಶೀಘ್ರದಲ್ಲೇ ನೇಮಿಸಬೇಕಾಗಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಅವರಲ್ಲಿ ಒತ್ತಾಯ ಮಾಡಿದ್ದಾರೆ.

Leave a Reply

Your email address will not be published. Required fields are marked *