ಬೆಳ್ತಂಗಡಿ: ತಾಲೂಕಿನ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಅ.6 ರಂದು ಮತ್ತೆ ಭೇಟಿ ಕೊಟ್ಟಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಬೆಳ್ತಂಗಡಿ ಅರಣ್ಯ ಇಲಾಖೆ ಅಧಿಕಾರಿಗಳನ್ನು ಕರೆದುಕೊಂಡು ಬಂದು ಸರ್ವೆ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಏಳು ಅಸ್ಥಿಪಂಜರ ಪತ್ತೆಯಾದ ಜಾಗವು ಅರಣ್ಯ ಇಲಾಖೆಗೆ ಸೇರಿದ ಜಾಗ ಎಂದು ಸರ್ವೆ ಮಾಡಿ ಎಸ್.ಐ.ಟಿ ಅಧಿಕಾರಿಗಳಿಗೆ ವರದಿ ನೀಡಲು ಆಗಮಿಸಿದ್ದಾರೆ ಎಂದು ಕೆಲವು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.



