ಮಂಗಳೂರು: ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ಮೀನು ಹಿಡಿಯಲು ಹೋದ ವ್ಯಕ್ತಿ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಮನೋಹರ್ ಪುತ್ರನ್ (53) ಎಂದು ಗುರತಿಸಲಾಗಿದೆ.
ಅ.07 ರಂದು ಮನೋಹರ್ ಅವರು ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು ಹೋದಾಗ ಆಕಸ್ಮಿಕವಾಗಿ ಪಲ್ಗುಣಿ ನದಿಗೆ ಜಾರಿ ಬಿದ್ದಿದ್ದಾರೆ ಎಮದು ತಿಳಿದುಬಂದಿದೆ.




