ಬೆಂಗಳೂರು: ಎಸ್ಎಸ್ಎಲ್ಸಿ ಅಂತಿಮ ಪರೀಕ್ಷೆಯಲ್ಲಿ 33% ಅಂಕ ಪಡೆದರೆ ಉತ್ತೀರ್ಣ ಎಂಬುದಾಗಿ ಘೋಷಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೀಗ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು 33% ಪಾಸಿಂಗ್ ಅಂಕ ನಿಗದಿ ಮಾಡಲಾಗಿದೆ. 625ಕ್ಕೆ 206 ಅಂಕ ಪಡೆದರೆ ಅಥವಾ ಆಯಾ ವಿಷಯದ ಒಟ್ಟು ಅಂಕಗಳಲ್ಲಿ 30 ಅಂಕ ಪಡೆದಿರಬೇಕು. ಆಂತರಿಕ ಮತ್ತು ಬಾಹ್ಯ ಅಂಕ ಸೇರಿ ಒಟ್ಟು 33% ಅಂಕ ಪಡೆದ ವಿದ್ಯಾರ್ಥಿಯನ್ನ ಉತ್ತೀರ್ಣ ಎಂದು ಘೋಷಿಸಲಾಗುತ್ತದೆ. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಈ ನಿಯಮ ಅನ್ವಯವಾಗಲಿದೆ ಎಂದು ತಿಳಿಸಿದರು.

2025-26ನೇ ಸಾಲಿನಿಂದ ಈ ನಿಯಮ ಜಾರಿಗೆ ಬರಲಿದ್ದು, ಈ ವರ್ಷ ಹಾಜರಾಗೋ ಎಲ್ಲಾ ವಿದ್ಯಾರ್ಥಿಗಳು, ರಿಪೀಟರ್ಸ್, ಖಾಸಗಿ ಅಭ್ಯರ್ಥಿಗಳಿಗೂ ಈ ನಿಯಮ ಅನ್ವಯವಾಗಲಿದೆ ಎಂದರು.




