ಕಲ್ಲಡ್ಕ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚರಂಡಿ ಏರಿದ ಘಟನೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುವಿನಲ್ಲಿ ಅ.22 ರಂದು ನಡೆದಿದೆ.

ಪುತ್ತೂರು ನಿವಾಸಿ, ಇರ್ಶಾದ್ ಎಂಬವರು ಪತ್ನಿ ಜೊತೆ ಮಂಗಳೂರಿಗೆ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದ್ದು ಅತಿಯಾದ ಮಳೆ ಕಾರಣ ಅನ್ನುವ ಮಾಹಿತಿ ಲಭ್ಯವಾಗಿದೆ.
ಘಟನೆಯಿಂದ ಯಾವುದೇ ರೀತಿಯ ಅಪಾಯಗಳು ಉಂಟಾಗಿಲ್ಲ.




