ಪುತ್ತೂರು: ಬೆಂಗಳೂರಿನ ಕಂಬಳದ ರೂವಾರಿ, ಬೆಂಗಳೂರು ತುಳುಕೂಟದ ಅಧ್ಯಕ್ಷರಾದ ಸುಂದರರಾಜ್ ರೈ ಹೃದಯಾಘಾತದಿಂದ ನಿಧನರಾದರು.

ಬೆಂಗಳೂರಿನ ತುಳುಕೂಟದ ಎರಡನೇ ಅವಧಿಯ ಅಧ್ಯಕ್ಷರಾದ ಸುಂದರರಾಜ್ ರೈ ಗಳು ಬೆಂಗಳೂರಿನ ಕಂಬಳ ಮಾಡಬೇಕೆಂಬ ಪ್ರಯತ್ನದಲ್ಲಿದ್ದರು. ನಂತರ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನಡೆದ ಬೆಂಗಳೂರು ಕಂಬಳ ಇತಿಹಾಸ ಬರೆದಿತ್ತು.

ಮಾತ್ರವಲ್ಲ ಈ ವರ್ಷ ಡಿಸೆಂಬರ್ ನಲ್ಲಿ ಬೆಂಗಳೂರಿನಲ್ಲಿ ತುಳುನಾಡಿನ ಪಿಲಿಗೊಬ್ಬನ್ನು ಅದ್ದೂರಿಯಾಗಿ ಆಯೋಜಿಸುವ ಯೋಜನೆಯನ್ನು ಅವರು ಹಾಕಿಕೊಂಡಿದ್ದರು.



