ಚಿಕ್ಕಮಗಳೂರು : ಹೊಸ ಜೀವನದ ಹೊಸ್ತಿಲ್ಲಲ್ಲಿ ನಿಂತಿದ್ದ ವಧು ಲೋ ಬಿಪಿಯಿಂದ ಹೃದಯಾಘಾತಕ್ಕೆ ಬಲಿಯಾದ ಘಟನೆ ಅ. 30 ರಂದು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರನ್ನು ಶೃತಿ (24 ವ) ಎಂದು ಗುರುತಿಸಲಾಗಿದೆ.

ತರೀಕೆರೆಯ ಹುಡುಗನೊಂದಿಗೆ ಶೃತಿಗೆ ಮದುವೆ ನಿಶ್ಚಯವಾಗಿದ್ದು, ಆದರೆ ಶೃತಿ ಲೋ ಬಿಪಿ ಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.





