ಮಂಗಳೂರು: ಖಾಸಗಿ ಸಿಟಿ ಬಸ್ಸೊಂದು ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ರಸ್ತೆಯ ಡಿವೈಡರ್ ಮೇಲೇರಿದ ಘಟನೆ ಮಂಗಳೂರು ನಗರದ ಕೊಟ್ಟಾರ ಕೃಷ್ಣ ಭಜನಾ ಮಂದಿರ ಎದುರು ಅ.31 ರಂದು ನಡೆದಿದೆ.

ಈ ಖಾಸಗಿ ಸಿಟಿ ಬಸ್ಸು ಮಂಗಳೂರಿನ ಸ್ಟೇಟ್ ಬ್ಯಾಂಕ್- ಕೂಳೂರು- ಕಾವೂರು-ಬೋಂದೆಲ್ ರೂಟ್ ನಲ್ಲಿ ಸಂಚರಿಸುವ ಬಸ್ ಆಗಿದ್ದು, ಚಾಲಕ ಬಸ್ಸನ್ನು ಅತಿಯಾದ ವೇಗ ಮತ್ತು ನಿರ್ಲಕ್ಷತನದಿಂದ ಚಾಲನೆ ಮಾಡಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಅದೃಷ್ಟವಶಾತ್ ಯಾವುದೇ ಅಪಾಯ ಉಂಟಾಗಿಲ್ಲ. ರಸ್ತೆಯಲ್ಲಿ ಓಡಾಡುವ ಇತರ ವಾಹನಗಳಿಗೂ ಯಾವುದೇ ಹಾನಿ ಸಂಭವಿಸಿಲ್ಲ. ಇನ್ನು ಅಪಘಾತಕ್ಕೆ ಕಾರಣನಾದ ಚಾಲಕನ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಟ್ರಾಫಿಕ್ ವಿಭಾಗದ ಡಿಸಿಪಿ ತಿಳಿಸಿದ್ದಾರೆ.




