ಪೂಂಜದ ಶ್ರೀ ಪಂಚದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಮೊದಲ ಬಾರಿಗೆ ಶತ ಚಂಡಿಕಾಯಾಗ

ಬಂಟ್ವಾಳ: ಸಿದ್ಧಕಟ್ಟೆ ಸಮೀಪದ ಪ್ರಸಿದ್ಧ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇದೇ ಪ್ರಥಮ ಬಾರಿಗೆ ಶತ ಚಂಡಿಕಾಯಾಗ ನ. 1 ರಂದು ನಡೆಯಿತು.

ಕ್ಷೇತ್ರದ ತಂತ್ರಿ ಬಾಲಕೃಷ್ಣ ಪಾಂಗಣ್ಣಾಯ ಸಹಿತ ಅಸ್ರಣ್ಣ ಕೃಷ್ಣಪ್ರಸಾದ್ ಆಚಾರ್ಯ, ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ ಇವರು ವಿವಿಧ ವೈದಿಕ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿದರು.

ಈ ವೇಳೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುದರ್ಶನ್ ಶೆಟ್ಟಿ ಹಕ್ಕೇರಿ, ಮಾಜಿ ಅಧ್ಯಕ್ಷ ರತ್ನಕುಮಾರ್ ಚೌಟ, ಸದಸ್ಯರಾದ ಅಶೋಕ್ ಆಚಾರ್ಯ, ಅರುಣ್ ಮಂಜಿಲ, ಗೀತಾ ವಿಶ್ವನಾಥ್, ಸುಧೀಂದ್ರ ಶೆಟ್ಟಿ, ಸುರೇಶ್ ನೀರಪಲ್ಕೆ, ವ್ಯವಸ್ಥಾಪನ ಸಮಿತಿ ಸದಸ್ಯ ಉಮೇಶ್ ಶೆಟ್ಟಿ ಕೊನೆರೊಟ್ಟು , ರಂಜನಿ, ಭಜನಾ ಮಂಡಳಿ ಅಧ್ಯಕ್ಷ ರವಿಪ್ರಸಾದ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಮಧ್ಯಾಹ್ನ ಪೂರ್ಣಾಹುತಿ ಬಳಿಕ ದೇವರಿಗೆ ವಿಶೇಷ ಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಶತ ಚಂಡಿಕಯಾಗದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ದೇವಪ್ಪ ಕುಲಾಲ್, ಯೊಗೀಶ್ ಕುಮಾರ್, ಪ್ರಮುಖರಾದ ಕಿರಣ್ ಕುಮಾರ್ ಮಂಜಿಲ, ಧೀರಜ್ ರೈ ಸಂಪಾಜೆ, ದುರ್ಗಾದಾಸ್ ಶೆಟ್ಟಿ ಕರೆಂಕಿಜೆ, ಅರ್ಕಕೀರ್ತ ಇಂದ್ರ, ಡಾ.ಪ್ರಭಾಚಂದ್ರ ಜೈನ್, ಡಾ.ಸುದೀಪ್ ಕುಮಾರ್ ಜೈನ್ ಮತ್ತಿತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *