Breaking
23 Mar 2026, Mon

ಮಂಡ್ಯ ವಿದ್ಯುತ್‌ ಸ್ಪರ್ಶಿಸಿ ರೈತ ಸಾವು

ಮಂಡ್ಯ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಸಾಗ್ರಯ ಗ್ರಾಮದಲ್ಲಿ ರೈತ ಜಮೀನಿನಲ್ಲಿ ಕೆಲಸಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನ.3 ರಂದು ನಡೆದಿದೆ.

ಮೃತರನ್ನು ರಮೇಶ್ ಎಂದು ಗುರುತಿಸಲಾಗಿದೆ.

ಎಂದಿನಂತೆ ತಮ್ಮ ಜಮೀನಿಗೆ ತೆರಳಿದ್ದರು. ತೆಂಗಿನ ಗರಿಗಳನ್ನು ಜಮೀನಿನಿಂದ ಹೊರ ಹಾಕುವ ಕೆಲಸ ಮಾಡುತ್ತಿದ್ದ ವೇಳೆ 11 ಕೆ.ವಿ ಸಾಮರ್ಥ್ಯದ ವಿದ್ಯುತ್‌ ತಂತಿಗಳಿಗೆ ತೆಂಗಿನ ಗರಿ ತಾಗಿ ಸ್ಥಳದಲ್ಲೇ ಅವರು ಮ್ಮತಪಟ್ಟಿದ್ದಾರೆ.

Leave a Reply

Your email address will not be published. Required fields are marked *