ಕಾರ್ಕಳ: ಅಕ್ರಮ ಕಸಾಯಿ ಖಾನೆ ಅಡ್ಡೆಗೆ ಪೊಲೀಸರು ದಾಳಿ ನಡೆಸಿರುವ ಘಟನೆ ಕಾರ್ಕಳ ತಾಲೂಕಿನ ನಲ್ಲೂರಿನಲ್ಲಿ ನಡೆದಿದೆ.

ದಾಳಿಯಲ್ಲಿ ಸುಮಾರು 70 ಕೆ.ಜಿ ದನದ ಮಾಂಸ ಪತ್ತೆಯಾಗಿದೆ ಎಂದು ತಿಳಿದುಬಂದಿದ್ದು, ಆರೋಪಿ ಅಶ್ರಫ್ ಘಟನೆಯ ಬಳಿಕ ಪರಾರಿಯಾಗಿರುವುದಾಗಿ ಮೂಲಗಳು ತಿಳಿಸಿವೆ.
ಸ್ಥಳೀಯ ಹಿಂದೂ ಕಾರ್ಯಕರ್ತರ ಸುಳಿವಿನಿಂದಲೇ ಈ ಅಕ್ರಮ ಬಯಲಾಗಿದ್ದು, ತನಿಖೆ ಮುಂದುವರಿದಿದೆ.




