ನವದೆಹಲಿ: ಕೆಂಪು ಕೋಟೆಯ ಬಳಿ ನ.10ರ ಸಂಜೆ ಸಂಭವಿಸಿದ ಕಾರು ಬಾಂಬ್ ಸ್ಫೋಟದಲ್ಲಿ ಹಲವರು ಮೃತಪಟ್ಟಿದ್ದು ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.
ಘಟನೆಯ ಬಳಿಕ ಮುಖ್ಯಮಂತ್ರಿ ರೇಖಾ ಗುಪ್ತಾ ಆಸ್ಪತ್ರೆಗಳಿಗೆ ತೆರಳಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದ್ದು, ಸ್ಫೋಟದಲ್ಲಿ ಶಾಶ್ವತವಾಗಿ ಅಂಗವಿಕಲರಾದವರಿಗೆ 5 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.





