ಉಡುಪಿ: ಕೆಲಸದ ನಿಮಿತ್ತ ಕುಂದಾಪುರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮನೆಗೆ ವಾಪಾಸ್ಸಾಗದೇ ಕಾಣೆಯಾಗಿರುವ ಘಟನೆ ಅ.27 ರಂದು ಉಡುಪಿಯಲ್ಲಿ ನಡೆದಿದೆ.
ಕಾಣೆಯಾದ ವ್ಯಕ್ತಿಯನ್ನು ಬೈಂದೂರು ತಾಲೂಕು ಬಿಜೂರು ಗ್ರಾಮದ ಕಂಚಿಕಾನ ನಿವಾಸಿ ಸುರೇಂದ್ರ (31) ಎಂದು ಗುರುತಿಸಲಾಗಿದೆ.

ಕಾಣೆಯಾದವರು 5 ಅಡಿ 5 ಇಂಚು ಎತ್ತರ, ಕನ್ನಡ ಮಾತನಾಡಬಲ್ಲವರಾಗಿದ್ದಾರೆ. ಇವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಬೈಂದೂರು ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಬೈಂದೂರು ಪೋಲಿಸ್ ಠಾಣಾಧಿಕಾರಿಗಳು ತಿಳಿಸಿದ್ದಾರೆ.




