ಕಾಕ೯ಳ : ತಾಯಿ ಹೊಸ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕಾಗಿ ವಿದ್ಯಾರ್ಥಿಯೊವ೯ ನೀರು ನಿಂತಿದ್ದ ಕಲ್ಲುಕೋರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಕ೯ಳದಲ್ಲಿ ನ. 13ರಂದು ನಡೆದಿದೆ.
ಮೃತರನ್ನು ನಿಟ್ಟೆಯ ಪ್ರಥಮ ಪಿಯುಸಿ ವಿದ್ಯಾರ್ಥಿ ಸುಮಂತ್ ನಂದಳಿಕೆ(16) ಎಂದು ಗುರುತಿಸಲಾಗಿದೆ.

ಸುಮಂತ್ ಜೊತೆ ಮೊದಲು ಇದ್ದ ಮೊಬೈಲ್ ಹಾಳಾಗಿದ್ದರಿಂದ ರಿಪೇರಿಗೆ ನೀಡಲಾಗಿತ್ತು. ಈ ಮಧ್ಯೆ ಈತ ಹೊಸ ಮೊಬೈಲ್ ಕೊಡಿಸುವಂತೆ ಅಮ್ಮನಲ್ಲಿ ಹಟ ಹಿಡಿದಿದ್ದನು. ಕೆಲ ತಿಂಗಳು ಕಳೆದ ಬಳಿಕ ಹೊಸ ಮೊಬೈಲ್ ಕೊಡಿಸುವುದಾಗಿ ಅಮ್ಮ ಭರವಸೆ ನೀಡಿದರೂ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ.




