ಬೆಳ್ತಂಗಡಿ: ಕಾರೊಂದು ಪಲ್ಟಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಕಾಪಿನ ಬಗಿಲು ಬಳಿ ನ.15 ರಂದು ನಡೆದಿದೆ.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರು ಕೊಕ್ಕಡದ ಕಾಪಿನ ಬಗಿಲು ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು ಓರ್ವರಿಗೆ ಗಂಭೀರ ಗಾಯವಾಗಿದ್ದು ಇನ್ನುಳಿದ ಮೂವರು ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.






