ಬಂಟ್ವಾಳ : ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಸಜೀಪ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಂಜುನಾಥ ಸ್ವಾಮಿ ಭಕ್ತ ಮಂಡಳಿಯಿಂದ ಶ್ರೀ ದೇವರಿಗೆ ವಿಶೇಷ ರಂಗ ಪೂಜೆ ನೆರವೇರಿತು.

ಸಜೀಪ ಮಾಗಣೆ ತಂತ್ರಿಗಳಾದ ಎಂ. ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರುಗಿದ ಈ ಪೂಜೆಯಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್ಟ. ಅರ್ಚಕ ಗಣಪತಿ ಮಹಾಬಲೇಶ್ವರ ಭಟ್ಟ, ರಾಮಕೃಷ್ಣ ಭಟ್ ಜಿ. ಕೆ, ರಾಧಾಕೃಷ್ಣ ಆಳ್ವ, ಸುಧಾಕರ ಕೇಟಿ ಕಿಶನ್ ಸೇನವ ಮೊದಲಾದವರು ಉಪಸ್ಥಿತರಿದ್ದರು.





