Breaking
21 Mar 2026, Sat

ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಉಡುಪಿ: ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಸಂಭ್ರಮ 2025 ಕಾರ್ಯಕ್ರಮ ಬಹರೈನ್ನ ದಿ ಇಂಡಿಯನ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು.

ಈ ವೇಳೆ ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಭಾರತೀಯ ರಾಯಭಾರಿ ಎಚ್.ಇ. ವಿನೋದ್ ಕೆ. ಜೇಕಬ್, ಪುತ್ತೂರು ಶಾಸಕ ಅಶೋಕ್ ಕುಮಾರ್‌ ರೈ, ಬಹರೈನ್ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಉಪಾಧ್ಯಕ್ಷ ಮುಹಮ್ಮದ್ ಅಬ್ದುಲ್ ಜಬ್ಬಾರ್ ಆಲ್- ಕೂಹೆಜಿ, ಪ್ರವಾಸಿ ಭಾರತೀಯ ಪ್ರಶಸ್ತಿ ಪುರಸ್ಕೃತ ಜಿ.ಬಾಬು ರಾಜನ್, ದಿ ಇಂಡಿಯನ್ ಕ್ಲಬ್ ಅಧ್ಯಕ್ಷ ಜೋಸೆಫ್ ಜ್ವಾಯಿ, ಬಹರೈನ್ ಕ್ರಿಕೆಟ್ ಫೆಡರೇಶನ್ ಸಲಹಾ ಸಮಿತಿ ಅಧ್ಯಕ್ಷ ಮುಹಮ್ಮದ್ ಮನ್ಸೂರ್‌ ಕನ್ನಂಗಾರ್, ಬಹರೈನ್ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಯ ಅಧ್ಯಕ್ಷ ರಾಜ್ ಕುಮಾರ್ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *