Breaking
22 Mar 2026, Sun

ಬೋರ್ಡಿಂಗ್ ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಮಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಪತ್ತೆ: ಟಿಟಿಇ ಯ ತ್ವರಿತ ಕಾರ್ಯಕ್ಕೆ ಮೆಚ್ಚುಗೆ

ಉಡುಪಿ : ಬೋರ್ಡಿಂಗ್ ಹಾಸ್ಟೆಲ್‌ನಿಂದ ಕಾಣೆಯಾಗಿದ್ದ 13 ವರ್ಷದ ಬಾಲಕ ಮಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಡಿ.4 ರಂದು ಸುರಕ್ಷಿತವಾಗಿ ಪತ್ತೆಯಾದ ಘಟನೆ ನಡೆದಿದೆ.

ಮಂಗಳೂರು ವಿಭಾಗದ ಮುಖ್ಯ ಟಿಟಿಇ (ಹೆಡ್ ಟಿಟಿಇ) ರಾಘವೇಂದ್ರ ಶೆಟ್ಟಿ ಅವರು ಕೋಚ್ S3 ನಲ್ಲಿ ಬಾಲಕ ಒಬ್ಬನೇ ಪ್ರಯಾಣಿಸುತ್ತಿದ್ದಾಗ, ಟಿಕೆಟ್ ತಪಾಸಣೆ ವೇಳೆ ಬಾಲಕನ ಪ್ರತಿಕ್ರಿಯೆಯಲ್ಲಿ ವ್ಯತ್ಯಾಸ ಕಂಡು, ಆತನ ಬ್ಯಾಗ್ ಪರಿಶೀಲಿಸಿದಾಗ, ಶಾಲೆಯ ಐಡಿ ಕಾರ್ಡ್ ದೊರೆತಿದೆ. ತಕ್ಷಣವೇ ಅವರು ಶಾಲಾ ಅಧಿಕಾರಿಗಳನ್ನು ಸಂಪರ್ಕಿಸಿದ್ದು,ಆಗ ಬಾಲಕ ಹಾಸ್ಟೆಲ್‌ನಿಂದ ಓಡಿಹೋಗಿರುವುದು ದೃಢಪಟ್ಟಿದೆ.

ಬಾಲಕನ ತಾಯಿಗೆ ಮಗ ಸುರಕ್ಷಿತವಾಗಿರುವ ಬಗ್ಗೆ ಮಾಹಿತಿ ನೀಡಲಾಯಿತು. ಆತ ತಾಯಿಯೊಂದಿಗೆ ವಾಸಿಸುತ್ತಿದ್ದು, ಆಕೆ ಮನೆಗೆಲಸ ಮಾಡಿ ಮಗನನ್ನು ಓದಿಸುತ್ತಿದ್ದರು. ಉಡುಪಿ ನಿಲ್ದಾಣದಲ್ಲಿ ಬಾಲಕನನ್ನು ರೈಲ್ವೆ ಸಂರಕ್ಷಣಾ ಪಡೆ (ಆರ್ಪಿಎಫ್)ಗೆ ಹಸ್ತಾಂತರಿಸಲಾಯಿತು. ಪೊಲೀಸರು ಬಾಲಕ ಸುರಕ್ಷಿತವಾಗಿ ಮನೆ ಸೇರುವ ವರೆಗೆ ಆತನನ್ನು ಉಡುಪಿಯ ಮಕ್ಕಳ ಪಾಲನಾ ಕೇಂದ್ರದಲ್ಲಿ ಇರಿಸಿದ್ದರು.

ರೈಲ್ವೆ ಟಿಟಿಇ ರಾಘವೇಂದ್ರ ಶೆಟ್ಟಿ ಅವರ ಕ್ಷಿಪ್ರ ಮತ್ತು ಕರ್ತವ್ಯಪ್ರಜ್ಞೆಯನ್ನು ಶ್ಲಾಘಿಸಿ, ಕೊಂಕಣ ರೈಲ್ವೆಯ ಸಿಡಿಎಂ ಸಂತೋಷ್ ಕುಮಾರ್ ಝಾ ಅವರು 5,000 ರೂ. ನಗದು ಬಹುಮಾನ ನೀಡಿ ಗೌರವಿಸಿದ್ದಾರೆ.

Leave a Reply

Your email address will not be published. Required fields are marked *