Breaking
23 Mar 2026, Mon

ಮಾಣಿ: ಚಕ್ರ ಎಸೆತ ಸ್ಪರ್ಧೆಯಲ್ಲಿ ಬಾಲ ವಿಕಾಸದ ಕೃತಿ ಎನ್.ಪಿ. ರಾಷ್ಟ್ರಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಶಿಕ್ಷಣ ಇಲಾಖೆಯ ವತಿಯಿಂದ ನಡೆದ ರಾಜ್ಯಮಟ್ಟದ 17 ರ ವಯೋಮಾನದ ಹುಡುಗಿಯರ ಚಕ್ರ ಎಸೆತ ಸ್ಪರ್ಧೆಯಲ್ಲಿ ಮಾಣಿ- ಪೆರಾಜೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಕೃತಿ ಎನ್.ಪಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಡಿ. 03 ರಿಂದ 06 ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗಿ ಮುಂದೆ ಲಕ್ನೋದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ಕಲ್ಲಡ್ಕ ಸಮೀಪದ ನೆಟ್ಲ ನಿವಾಸಿಗಳಾದ ದಿನೇಶ್ ಬಿ. ಮತ್ತು ತೇಜಾಕ್ಷಿ ದಂಪತಿಗಳ ಪುತ್ರಿಯಾಗಿರುವ ಈಕೆಗೆ ಬಾಲವಿಕಾಸ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ದಿನಕರ್ ಪೂಜಾರಿ ಮತ್ತು ಸೌಮ್ಯ ಎಸ್ ಹಾಗೂ ಪೆರ್ಮನ್ನೂರು ಬಬ್ಬುಕಟ್ಟೆ ಪ್ರೌಢಶಾಲೆಯ ಗಣೇಶ್ ಕುಲಾಲ್ ಕೊಲ್ಯ ತರಬೇತಿ ನೀಡಿರುತ್ತಾರೆ.

ವಿಜೇತ ಕೃತಿ ಎನ್.ಪಿ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಪ್ರಹ್ಲಾದ್ ಶೆಟ್ಟಿ ಜೆ, ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ, ಮುಖ್ಯಶಿಕ್ಷಕಿ ಸುಪ್ರಿಯಾ ಡಿ. ದೈಹಿಕ ಶಿಕ್ಷಣ ಶಿಕ್ಷಕರಾದ ದಿನಕರ್ ಪೂಜಾರಿ ಮತ್ತು ಸೌಮ್ಯ ಎಸ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಪೋಷಕರಾದ ಸುಚೇತ್ ಶೆಟ್ಟಿ ಮಿತ್ತಿಮಾರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *