ಬಂಟ್ವಾಳ: ಕೆನರಾ ಬ್ಯಾಂಕ್ ವತಿಯಿಂದ ಮುಗುಳಿಯ ಸಜೀಪ ಮುನ್ನೂರಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶಾಶ್ವತ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲು ಸಹಾಯಧನವನ್ನು ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ರಮೇಶ್ ನಾಯಕ ಅವರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯ ಶಂಕರ ಬಾಸ್ರೀತಾಯ ರಿಗೆ ನಗದನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ಅರ್ಚಕ ಕೃಷ್ಣ ಭಟ್, ಕೃಷ್ಣಕುಮಾರ್ ಸಮಿತಿ ಸದಸ್ಯರಾದ ಎನ್ ಕೆ ಶಿವ, ಹರಿಪ್ರಸಾದ್ ಭಂಡಾರಿ, ಶ್ರೀನಿವಾಸ ನಾಯಕ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.




