ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಲ್ಲಡ್ಕ ವಲಯ ಹಾಗು ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ, ಗೋಳ್ತಮಜಲು ಗ್ರಾಮ ಪಂಚಾಯತ್, ಬಾಳ್ತಿಲ ಗ್ರಾಮ ಪಂಚಾಯತ್ ಹಾಗೂ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಕಲ್ಲಡ್ಕ, ಹಸಿರು ಸೇವಾದಳ ಮಂಗಳೂರು, ಆಶೀರ್ವಾದ ಸಂಜೀವಿನಿ ಒಕ್ಕೂಟ ಗೋಳ್ತಮಜಲು ಜಂಟಿ ಆಶ್ರಯದಲ್ಲಿ ಸ್ಥಳೀಯ ಸಂಘಟನೆಗಳ ಸಹಕಾರದೊಂದಿಗೆ ಕಲ್ಲಡ್ಕ ಪೇಟೆಯಲ್ಲಿ ಡಿ. 14 ರಂದು ಸ್ವಚ್ಛತಾ ಕಾರ್ಯಕ್ರಮವು ನಡೆಯಲಿದೆ.

ಬೆಳಿಗ್ಗೆ 6.30 ರಿಂದ 9 ಗಂಟೆಯವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದ್ದು ಸಾರ್ವಜನಿಕರೆಲ್ಲರೂ ಈ ಕಾರ್ಯಕ್ರಮದಲ್ಲಿ ಸೇರಿ ಸ್ವಚ್ಚತೆಯಲ್ಲಿ ಭಾಗಿಯಾಗಿ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




