Breaking
11 Aug 2026, Tue

ಎಸ್.ಎಲ್.ಆರ್.ಎಂ.ಒಣ ತ್ಯಾಜ್ಯ ಘಟಕಕ್ಕೆ ಆಕಸ್ಮಿಕವಾಗಿ ತಗುಲಿದ ಬೆಂಕಿ

ಕುಂದಾಪುರ: ಕೋಟೇಶ್ವರ ಪಂಚಾಯತ್ ವ್ಯಾಪ್ತಿಯ ಎಸ್.ಎಲ್.ಆರ್.ಎಂ.ಒಣ ತ್ಯಾಜ್ಯ ಘಟಕಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳು ಹಾನಿಯಾದ ಘಟನೆ ಡಿ. 21 ರಂದು ನಡೆದಿದೆ

ಕಟ್ಟಡದ ಮೇಲ್ಭಾಗದಲ್ಲಿ ಸ್ಥಾಪಿಸಲಾಗಿದ್ದ ಒಣ ತ್ಯಾಜ್ಯ ಘಟಕದಲ್ಲಿ ಶೇಖರಣೆ ಮಾಡಿಟ್ಟಿದ್ದ ಒಣ ತ್ಯಾಜ್ಯಕ್ಕೆ ಆಕಸ್ಮಿಕ ಬೆಂಕಿ ತಗುಲಿ ಯಂತ್ರೋಪಕರಣಗಳು ಬೆಂಕಿಗೆ ಆಹುತಿಯಾಗಿವೆ.

ಘಟನಾ ಸ್ಥಳಕ್ಕೆ ಬೈಂದೂರು ಮತ್ತು ಕುಂದಾಪುರ ಅಗ್ನಿಶಾಮಕ ದಳದವರು ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *