ಉಡುಪಿ: ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕ ಹಾಗೂ ಶ್ರೀ ಕ್ಷೇತ್ರ ಶಂಕರಪುರ ಉಡುಪಿ ಜಿಲ್ಲೆ ಸಹಭಾಗಿತ್ವದಲ್ಲಿ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಾರ್ಗ ದರ್ಶನದಲ್ಲಿ ಜ.1ರಿಂದ ಜ. 14ರ ವರೆಗೆ ಉಡುಪಿ, ಮಂಗಳೂರು ಹೆದ್ದಾರಿಯಾಗಿ ಶಬರಿಮಲೆ ಯಾತ್ರೆ ಮಾಡುವ ಅಯ್ಯಪ್ಪಸ್ವಾಮಿ ವ್ರತಧಾರಿಗಳಿಗೆ ಅನ್ನದಾನ ಸೇವೆ, ವಿಶ್ರಾಂತಿ ವ್ಯವಸ್ಥೆ ಇದೆ.

ಈ ವ್ಯವಸ್ಥೆಯನ್ನು ಕಾಪು ಪಾಂಗಾಳ ಸೇತುವೆಯ ಬಳಿ ಮಾಡಲಾಗಿದೆ ಎಂದು ಶ್ರೀ ಕ್ಷೇತ್ರದ ಪ್ರಕಟನೆ ಮಾಧ್ಯಮಗಳ ಮೂಲಕ ಮಾಹಿತಿ ನೀಡಿದೆ.





