ಕಾರ್ಕಳ : ಬೃಹತ್ ಗಾತ್ರದ ವಿದ್ಯುತ್ ಕಂಬದಿಂದ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಜ.15 ರಂದು ಬಜಗೋಳಿಯ ಮುಡ್ರಾಲು ಕ್ರಾಸ್ ನಲ್ಲಿ ನಡೆದಿದೆ.
ಮೃತಪಟ್ಟ ಯುವಕ ಅಸ್ಸಾಂ ಮೂಲದವನೆಂದು ತಿಳಿದುಬಂದಿದೆ.

ವಿದ್ಯುತ್ ಕಂಬ ಅಳವಡಿಸುವ ಸಂದರ್ಭದಲ್ಲಿ ಯುವಕನೊಬ್ಬ 11 ಮೀಟರ್ ಎತ್ತರದ ಬೃಹತ್ ವಿದ್ಯುತ್ ಕಂಬವನ್ನು ಏರಿದ್ದು ಈ ವೇಳೆ ಮಳೆ ಜೊತೆಗೆ ಸಿಡಿಲು ಬಡಿದ ಆಘಾತದಿಂದಾಗಿ ಯುವಕ ಕೆಳಕ್ಕೆ ಬಿದ್ದು, ಪ್ರಾಣಕಳೆದುಕೊಂಡಿದ್ದಾನೆ .




