Breaking
10 May 2026, Sun

‘ಬ್ಯಾಂಕ್ ಆಫ್ ಬರೋಡಾ ಗ್ರೂಪ್ ಇನ್ಶೂರೆನ್ಸ್ ಸ್ಕೀಮ್’ ಅಡಿಯಲ್ಲಿ ಆರ್ಥಿಕ ನೆರವು

ಮಂಗಳೂರು: ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ ಪೊಲೀಸ್ ಸಿಬ್ಬಂದಿ ದಿವಂಗತ ಶ್ರೀ ಹರೀಶ್ ಜಿ. ಎನ್. ಅವರ ಕುಟುಂಬಕ್ಕೆ ‘ಬ್ಯಾಂಕ್ ಆಫ್ ಬರೋಡಾ ಗ್ರೂಪ್ ಇನ್ಶೂರೆನ್ಸ್ ಸ್ಕೀಮ್’ ಅಡಿಯಲ್ಲಿ ಆರ್ಥಿಕ ನೆರವು ನೀಡಿದೆ. ಬ್ಯಾಂಕಿನ ಈ ಬೆಂಬಲ ಉಪಕ್ರಮದ ಭಾಗವಾಗಿ, ಮೃತರ ಕುಟುಂಬಕ್ಕೆ ₹ 70 ಲಕ್ಷ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಲಾಯಿತು.

ಮಂಗಳೂರು ನಗರ ಪೊಲೀಸ್ ಕಮಿಷನರ್ ಶ್ರೀ ಸುಧೀರ್ ಕುಮಾರ್ ರೆಡ್ಡಿ, ಬ್ಯಾಂಕ್ ಆಫ್ ಬರೋಡಾ ಮಂಗಳೂರು ನಗರ ಪ್ರಾದೇಶಿಕ ಮುಖ್ಯಸ್ಥ ಶ್ರೀ ಸಿ.ವಿ.ಎಸ್. ಚಂದ್ರಶೇಖರ್, ಬ್ಯಾಂಕಿನ ಇತರ ಅಧಿಕಾರಿಗಳು, ಪೊಲೀಸ್ ಇಲಾಖೆಯ ಸಿಬ್ಬಂದಿ ಮತ್ತು ಮೃತರ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಈ ಚೆಕ್ ಅನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು.

ಕಷ್ಟಕಾಲದಲ್ಲಿ ತನ್ನ ಗ್ರಾಹಕರ ಕುಟುಂಬಗಳಿಗೆ ಬೆಂಬಲವಾಗಿ ನಿಲ್ಲಲು ಬ್ಯಾಂಕ್ ಆಫ್ ಬರೋಡಾ ಬದ್ಧವಾಗಿದೆ ಮತ್ತು ತನ್ನ ವಿಮಾ ಹಾಗೂ ಕಲ್ಯಾಣ ಯೋಜನೆಗಳ ಮೂಲಕ ಆರ್ಥಿಕ ರಕ್ಷಣೆಯನ್ನು ನೀಡುವುದನ್ನು ಮುಂದುವರಿಸುತ್ತದೆ ಎಂದು ಈ ಸಂದರ್ಭದಲ್ಲಿ ಅಧಿಕಾರಿಗಳು ತಿಳಿಸಿದರು.

Leave a Reply

Your email address will not be published. Required fields are marked *