ಬಂಟ್ವಾಳ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ಬಂಟ್ವಾಳ ಇದರ 2026 ಜನವರಿ ತಿಂಗಳ ಕೇಂದ್ರೀಯ ಸಮಿತಿಯ ಸಭೆಯು ಕನ್ಯಾನ ಸಮೀಪದ ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜ.10 ರಂದು ನಡೆಯಿತು.

ಕೇಂದ್ರೀಯ ಸಮಿತಿಯ ಸಭೆಯಲ್ಲಿ ಕ್ಷೇತ್ರದ ಶ್ರೀಗಳಾದ ಮಹಾಬಲೇಶ್ವರ ಸ್ವಾಮೀಜಿ ಅವರು ಮಾರ್ಗದರ್ಶನ ನೀಡಿದರು.

ಈ ಸಂದರ್ಭ ಸಭೆಯಲ್ಲಿ ಕೇಂದ್ರ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ತಾಲೂಕು, ಘಟಕಗಳ ಪದಾಧಿಕಾರಿಗಳು ಭಾಗವಹಿಸಿದರು.




