ಮಂಗಳೂರು : ಹೊಯ್ಗೆ ಬಜಾರ್ನಲ್ಲಿರುವ ಹಂಚಿನ ಫ್ಯಾಕ್ಟರಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಜ.20) ನಡೆದಿದೆ.

ಫ್ಯಾಕ್ಟರಿಯಲ್ಲಿ ಹಂಚು ಸುಡಲು ಸಂಗ್ರಹಿಸಿಟ್ಟಿದ್ದ ಕಟ್ಟಿಗೆ ಮತ್ತು ಇತರ ವಸ್ತುಗಳಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪಾಂಡೇಶ್ವರ ಮತ್ತು ಕದ್ರಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.




