Breaking
23 Mar 2026, Mon

ನುಡಿದಂತೆ ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಧರ್ಮಸ್ಥಳ-ಮುಂಡಾಜೆ-ದಿಡುಪೆ ರಾಜ್ಯ ಹೆದ್ದಾರಿ 276ರ ಕಲ್ಮಂಜ ಗ್ರಾಮದ ಕೊತ್ತಲಿಗೆ, ವಂಜರೆಬೈಲ್ ಮತ್ತು ಪಿಲತಡ್ಕ ಭಾಗಗಳಲ್ಲಿನ ಹಳೆಯ ಸೇತುವೆಗಳು ಕಿರಿದಾಗಿದ್ದು, ಕುಸಿತಕೊಳಗಾಗಿ ನಾದು ರಸ್ತಿಯಲ್ಲಿದ್ದು ಅಪಾಯದ ಮಟ್ಟವನ್ನು ಮೀರಿದ್ದರಿಂದ ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅನುದಾನವನ್ನು ಪೂರೈಸಿದ್ದಾರೆ.

ದಿನನಿತ್ಯ ವಾಹನ ಸವಾರರ ಹಾಗೂ ಪಾದಚಾರಿಗಳ ಸಂಚಾರಕ್ಕೆ ತೀರಾ ಅಡಚಣೆಯಾಗುತ್ತಿದ್ದು ಆ ಭಾಗದ ಗ್ರಾಮಸ್ಥರು ಮಾನ್ಯ ಶಾಸಕರ ಗಮನಕ್ಕೆ ತಂದ ತತ್ಪರಿಣಾಮವಾಗಿ ಪ್ರಮುಖ ಜಿಲ್ಲಾ ರಸ್ತೆ ಮತ್ತು ಸೇತುವೆಗಳ ಅಭಿವೃದ್ಧಿ ಲೆಕ್ಕ ಶೀರ್ಷಿಕೆಯಡಿ ಅನುದಾನವನ್ನು ಬಿಡುಗಡೆಗೊಳಿಸಲು ಮಾನ್ಯ ಶಾಸಕರು ವಿಶೇಷವಾಗಿ ಶ್ರಮವಹಿಸಿದ್ದಾರೆ. ಹಾಗಾಗಿ ಸಾರ್ವಜನಿಕರ ಬಹುಕಾಲದ ಬೇಡಿಕೆಯ ತೀರಾ ಅಗತ್ಯತೆಯ ಸೇತುವೆಗಳ ಪುನರ್ ನಿರ್ಮಾಣ ಮಾಡುವ ಕಾರ್ಯವು ಈಗಾಗಲೇ ಕಾರ್ಯರಂಭಗೊಂಡಿದ್ದು ರೂ.3 ಕೋಟಿ 75 ಲಕ್ಷ ವೆಚ್ಚದಲ್ಲಿ 3 ಭಾಗಗಳಲ್ಲಿ ನೂತನ ಸೇತುವೆಗಳು ನಿರ್ಮಾಣಗೊಳ್ಳಲಿದೆ.

ಸದರಿ ಕಾಮಗಾರಿಗಳ ಪುನರ್ ನಿರ್ಮಾಣ ಕಾರ್ಯಕ್ಕೆ ಅನುದಾನ ಬಿಡುಗಡೆಗೊಳಿಸಿದ ತಾಲೂಕಿನ ಜನಪ್ರಿಯ ಶಾಸಕರಾದ ಹರೀಶ್ ಪೂಂಜಾರವರಿಗೆ ಮುಂಡಾಜೆ ಮತ್ತು ಕಲ್ಮಂಜ ಗ್ರಾಮದ ಉಭಯ ಗ್ರಾಮಸ್ಥರುಗಳು ವಿಶೇಷ ಧನ್ಯವಾದಗಳನ್ನು ತಿಳಿಸಿದ್ದಾರೆ.

Leave a Reply

Your email address will not be published. Required fields are marked *